ಪೋಷಣ್ ಅಭಿಯಾನದಿಂದ ಶಿಶು ಮತ್ತು ತಾಯಂದಿರ ಮರಣ ಪ್ರಮಾಣ ತಗ್ಗಿಸಲು ಸಾಧ್ಯ. ಇದರಿಂದ ಸ್ವಸ್ಥ ಸಮಾಜ ನಿರ್ಮಿಸಬಹುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಗಳು ಒಂದಾಗಿ ಯೋಜನೆ ಅನುಷ್ಠಾನಕ್ಕೆ ಸಹಕರಿಸಬೇಕು ಎಂದು ಸ್ಮೃತಿ ಇರಾನಿ ಮನವಿ ಮಾಡಿದರು.