ವೃತ್ತಿಯಲ್ಲಿ ವಾಹನ ಚಾಲಕರಾಗಿದ್ದದೀಪಕ್ ಎಡ್ವಿನ್ ಕಳೆದ ಸೆ.22ರಂದು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವಾಗ ನಾಯಿ ಎದುರಾದ ಪರಿಣಾಮ ಅಪಘಾತಕ್ಕೆ ಒಳಗಾಗಿದ್ದನು.ತಲೆಗೆ ತೀವ್ರವಾಗಿ ಗಾಯವಾದ ಪರಿಣಾಮ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆಮಣಿಪಾಲ್ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ, ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸಿದ ಪರಿಣಾಮ ವೈದ್ಯರು ಮಿದುಳು ನಿಷ್ಕ್ರೀಯವಾಗಿರುವುದಾಗಿ ಘೋಷಿಸಿದರು. ಕುಟುಂಬದ ಸದಸ್ಯರಿಗೆ ಅಂಗಾಂಗ ದಾನದ ಮಹತ್ವ ತಿಳಿಸಿ, ಸಮ್ಮತಿ ಪಡೆದುಕೊಂಡರು.