‘ನಗರದ ಹೃದಯ ಭಾಗದಿಂದ ದೂರ ಇರುವ ಈ ಕೆರೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಕೊಳಚೆ ನೀರಿನಿಂದ ಭರ್ತಿಯಾಗಿರುವ ಕೆರೆಯಲ್ಲಿ ಕಳೆ ತುಂಬಿದೆ. ಕೆರೆ ಸುತ್ತ ಬಡಾವಣೆಗಳನ್ನು ನಿರ್ಮಿಸಲಾಗಿದೆ. ಸರ್ವೆ ಮಾಡುವುದರಿಂದ ಯಾರು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವುದು ತಿಳಿದುಬರಲಿದೆ. ಬಿಬಿಎಂಪಿಯವರು ಒತ್ತುವರಿಯನ್ನು ತೆರವುಗೊಳಿಸಿ, ಸುತ್ತಲೂ ತಂತಿ ಬೇಲಿ ನಿರ್ಮಿಸಬೇಕು’ ಎಂದು ಯುನೈಟೆಡ್ ಬೆಂಗಳೂರು ಸಂಘಟನೆ ಸಂಚಾಲಕ ಎನ್.ಆರ್.ಸುರೇಶ್ ಒತ್ತಾಯಿಸಿದರು.