ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಉತ್ತೀರ್ಣದ ಬದಲು ಬೇರೆ ವಿಧಾನ ಅನುಸರಿಸಿ:ಎಬಿವಿಪಿ ಒತ್ತಾಯ

ಪರೀಕ್ಷಾ ವಿಧಾನದ ಗೊಂದಲ
Last Updated 21 ಮೇ 2020, 22:18 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ನಿಂದ ಶಿಕ್ಷಣ ವಲಯದಲ್ಲಿ ಪರೀಕ್ಷೆಗಳ ಕುರಿತು ಸಾಕಷ್ಟು ಗೊಂದಲ ಸೃಷ್ಟಿಯಾಗಿದೆ. ಸಾಮೂಹಿಕವಾಗಿ ಮುಂದಿನ ತರಗತಿಗೆ ಉತ್ತೀರ್ಣಗೊಳಿಸಬೇಕೆಂಬ ಒತ್ತಾಯ ಕೇಳಿ ಬಂದಿದೆ. ಸಾಮೂಹಿಕವಾಗಿ ಉತ್ತೀರ್ಣ ಮಾಡುವ ಬದಲು, ಪರ್ಯಾಯ ಪರೀಕ್ಷಾ ವಿಧಾನಗಳನ್ನು ಸರ್ಕಾರ ಅನುಸರಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಹೇಳಿದೆ.

‘ಎಬಿವಿಪಿಯು ದೂರವಾಣಿ ಕರೆ ಮಾಡುವ ಮೂಲಕ 8.68 ಲಕ್ಷ ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿದೆ. ಸಾಮೂಹಿಕ ಉತ್ತೀರ್ಣದ ಬದಲು, ಕ್ಯಾರಿ ಓವರ್‌ ಪದ್ಧತಿ, ಓಪನ್ ಬುಕ್‌ ಪರೀಕ್ಷೆ, ವರದಿ ಮತ್ತು ಅಸೈನ್‌ಮೆಂಟ್‌ ಪರಿಗಣಿಸಿ, ಸೂಕ್ತ ಅಂಕಗಳನ್ನು ನೀಡಿ ಉತ್ತೀರ್ಣ ಮಾಡಬೇಕು ಎಂಬ ಅಭಿಪ್ರಾಯವನ್ನು ಈ ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ’ ಎಂದು ಎಬಿವಿಪಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT