ತಮಿಳುನಾಡಿನ ರಾಣಿ ಹಾಗೂ ರಮಾದೇವಿ, ಕೂಲಿ ಕೆಲಸ ಮಾಡಿಕೊಂಡು ಗಾರೆಬಾವಿಪಾಳ್ಯದಲ್ಲಿ ನೆಲೆಸಿದ್ದರು. ಬೆಳಿಗ್ಗೆ ಕೆಲಸಕ್ಕೆ ಹೋಗುತ್ತಿದ್ದಾಗ ಕಾರು ಗುದ್ದಿದೆ. ಕೆಳಗೆ ಬಿದ್ದಾಗ ಮೈಮೇಲೆ ಚಕ್ರ ಹರಿದಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ರೋಹಿತ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಮಡಿವಾಳ ಸಂಚಾರ ಪೊಲೀಸರು ಹೇಳಿದ್ದಾರೆ.