ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ಮೂವರು ಸಾವು

Last Updated 8 ಮಾರ್ಚ್ 2020, 11:42 IST
ಅಕ್ಷರ ಗಾತ್ರ

ಶಕ್ತಿನಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಕಾಸ್ಪಾಡಿ ಮಾರ್ಗದಲ್ಲಿ ಶನಿವಾರ ತಡರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಇಲ್ಲಿನ ಆರ್‌ಟಿಪಿಎಸ್‌ ನೌಕರರ ಸಂಘದ ಅಧ್ಯಕ್ಷ ವೆಂಕಟೇಶ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಕರ್ನಾಟಕ ವಿದ್ಯುತ್ ನಿಗಮದ ನೌಕರರ ಕೇಂದ್ರ ಸಮಿತಿಯ ಅಧ್ಯಕ್ಷ ವೀರೇಂದ್ರ ಪಾಟೀಲ್ ಅವರ ಮನೆಯಲ್ಲಿ ಹಮ್ಮಿಕೊಂಡಿದ್ದ ಮಗುವಿನ ನಾಮಕರಣ ಕಾರ್ಯಕ್ರಮಕ್ಕೆ ಇಲ್ಲಿನ ಆರ್‌ಟಿಪಿಎಸ್‌ ನೌಕರರ ಸಂಘದ ಪದಾಧಿಕಾರಿಗಳು, ಕಾರಿನಲ್ಲಿ ಶಿವಮೊಗ್ಗಕ್ಕೆ ತೆರಳಿದ್ದರು. ಸಂಘದ ಅಧ್ಯಕ್ಷ ವೆಂಕಟೇಶ ಅವರು ವಾಹನ ಚಲಾಯಿಸುತ್ತಿದ್ದರು.

ಕಾರು ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಸಂಘದ ಅಧ್ಯಕ್ಷ ವೆಂಕಟೇಶ(51), ಪ್ರಧಾನ ಕಾರ್ಯದರ್ಶಿ ತಿಪ್ಪಣ್ಣ (61) ಜಂಟಿ ಕಾರ್ಯದರ್ಶಿ ಜಿ.ಸಿದ್ದಪ್ಪ (38) ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಶಕ್ತಿನಗರದಲ್ಲಿ ನಡೆಯಲಿದೆ.

ಮತ್ತೊಬ್ಬ ಸಂಘದ ಖಜಾಂಚಿ ನಾಗರಾಜ ಬಳೆ ಅವರ ಕಾಲು ಮೂಳೆ ಮುರಿದು ಗಂಭೀರ ಗಾಯಗಳಾಗಿವೆ. ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಈ ಘಟನೆಯಿಂದಾಗಿ ಶಕ್ತಿನಗರ, ದೇವಸೂಗೂರು ಮತ್ತು ಯದ್ಲಾಪುರ ಗ್ರಾಮದಲ್ಲಿ ಹಾಗೂ ಆರ್‌ಟಿಪಿಎಸ್‌ ನೌಕರರಲ್ಲಿ ತೀವ್ರ ಶೋಕದಲ್ಲಿ ಮುಳುಗುವಂತೆ ಮಾಡಿದೆ. ಅವರ ಕುಟುಂಬದವರ ಅಕ್ರಂದನ ಮುಗಿಲು ಮುಟ್ಟುವಂತಿದೆ.

ವೆಂಕಟೇಶ, ತಿಪ್ಪಣ್ಣ ಮತ್ತು ಸಿದ್ದಪ್ಪ ಅವರು ಆರ್‌ಟಿಪಿಎಸ್‌ ಸಂಘದ ಪ್ರಭಾವಿ ವ್ಯಕ್ತಿಗಳಾಗಿದ್ದರು. ಆರ್‌ಟಿಪಿಎಸ್‌ ನೌಕರರ ಬೇಡಿಕೆಗಳ ಸಂಬಂಧಿಸಿದ ಹೋರಾಟದ ನಾಯಕತ್ವ ವಹಿಸಿ, ಬೆಂಗಳೂರು ಮಟ್ಟದವರೆಗೂ ಪ್ರಭಾವ ಬೀರಿ, ನೌಕರರ ಹಿತ ಕಾಯುವಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT