ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೈಕ್ ಗುದ್ದಿ ಸೆಕ್ಯುರಿಟಿ ಗಾರ್ಡ್ ಸಾವು

Last Updated 5 ಫೆಬ್ರುವರಿ 2019, 19:51 IST
ಅಕ್ಷರ ಗಾತ್ರ

ಬೆಂಗಳೂರು: ಮೈಲಸಂದ್ರ ಜಂಕ್ಷನ್‌ ಬಳಿ ಮಂಗಳವಾರ ಬೆಳಿಗ್ಗೆ ರಸ್ತೆ ದಾಟುತ್ತಿದ್ದಾಗ ಬೈಕ್ ಗುದ್ದಿ ಆರ್‌.ವಿ.ಕಾಲೇಜಿನ ಸೆಕ್ಯುರಿಟಿ ಗಾರ್ಡ್ ಸೋಮೇಗೌಡ (55) ಮೃತಪಟ್ಟಿದ್ದಾರೆ.

ಚನ್ನಪಟ್ಟಣ ತಾಲ್ಲೂಕು ಅಂಬಾನಹಳ್ಳಿ ದೊಡ್ಡಿ ಗ್ರಾಮದ ಅವರು, ಪ್ರತಿದಿನ ಕೆಲಸಕ್ಕೆ ರೈಲಿನಲ್ಲಿ ಬಂದು ಹೋಗುತ್ತಿದ್ದರು. ರಾತ್ರಿ ಪಾಳಿ ಮುಗಿಸಿಕೊಂಡು ಬೆಳಿಗ್ಗೆ 6 ಗಂಟೆ ಸುಮಾರಿಗೆ ರೈಲು ನಿಲ್ದಾಣದ ಕಡೆಗೆ ನಡೆದು ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದಾಗ ತಲೆಗೆ ಕಲ್ಲು ಬಡಿದು ಗಂಭೀರ ಗಾಯವಾಯಿತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದರು ಎಂದು ಕೆಂಗೇರಿ ಸಂಚಾರ ಪೊಲೀಸರು ಹೇಳಿದರು.

ಬೈಕ್ ಸವಾರ ವೆಂಕಟೇಶ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಪೋಷಕರೊಂದಿಗೆ ರಾಜರಾಜೇಶ್ವರಿನಗರದಲ್ಲಿ ನೆಲೆಸಿರುವ ಅವರು, ಬಿಡದಿಯ ಹೋಟೆಲ್‌ ಒಂದರಲ್ಲಿ ಕೆಲಸ ಮಾಡುತ್ತಾರೆ. ಬೆಳಿಗ್ಗೆ ಬೈಕ್‌ನಲ್ಲಿ ಹೋಟೆಲ್‌ಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT