ಚನ್ನಪಟ್ಟಣ ತಾಲ್ಲೂಕು ಅಂಬಾನಹಳ್ಳಿ ದೊಡ್ಡಿ ಗ್ರಾಮದ ಅವರು, ಪ್ರತಿದಿನ ಕೆಲಸಕ್ಕೆ ರೈಲಿನಲ್ಲಿ ಬಂದು ಹೋಗುತ್ತಿದ್ದರು. ರಾತ್ರಿ ಪಾಳಿ ಮುಗಿಸಿಕೊಂಡು ಬೆಳಿಗ್ಗೆ 6 ಗಂಟೆ ಸುಮಾರಿಗೆ ರೈಲು ನಿಲ್ದಾಣದ ಕಡೆಗೆ ನಡೆದು ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದಾಗ ತಲೆಗೆ ಕಲ್ಲು ಬಡಿದು ಗಂಭೀರ ಗಾಯವಾಯಿತು. ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಕೊನೆಯುಸಿರೆಳೆದರು ಎಂದು ಕೆಂಗೇರಿ ಸಂಚಾರ ಪೊಲೀಸರು ಹೇಳಿದರು.