ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಚಾಲಕ ದುರ್ಮರಣ

Last Updated 1 ಏಪ್ರಿಲ್ 2019, 20:01 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ವೃತ್ತದಲ್ಲಿ ನಿಂತಿದ್ದ ಲಾರಿಗೆ ಟ್ರಕ್‌ ಡಿಕ್ಕಿ ಹೊಡೆದಿದ್ದರಿಂದ, ಟ್ರಕ್‌ನ ಚಾಲಕ ಮಂಜುನಾಥ್ (34) ಸ್ಥಳದಲ್ಲೇ ದುರ್ಮರಣಕ್ಕೆ ಈಡಾಗಿದ್ದಾರೆ.

ಗೌರಿಬಿದನೂರು ಬಳಿಯ ದೊಡ್ಡೂರಿನ ನಿವಾಸಿಯಾದ ಮಂಜುನಾಥ್, ಟ್ರಕ್‌ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

‘ಲಾರಿ ಚಲಾಯಿಸಿಕೊಂಡು ಯಲಹಂಕ ವೃತ್ತಕ್ಕೆ ಬಂದಿದ್ದ ಅದರ ಚಾಲಕ, ರಸ್ತೆ ಪಕ್ಕದಲ್ಲಿ ಲಾರಿ ನಿಲ್ಲಿಸಿ ಬೇರೆಡೆ ಹೋಗಿದ್ದರು.

ಅದೇ ರಸ್ತೆ ಮಾರ್ಗವಾಗಿ ಮಂಜುನಾಥ್, ಟ್ರಕ್‌ ಚಲಾಯಿಸಿಕೊಂಡು ಬರುತ್ತಿದ್ದರು. ಭಾನುವಾರ ರಾತ್ರಿ 11ರ ಸುಮಾರಿಗೆ ಲಾರಿಗೆ, ಟ್ರಕ್‌ ಡಿಕ್ಕಿ ಹೊಡೆದಿತ್ತು’ ಎಂದು ಯಲಹಂಕ ಸಂಚಾರ ಪೊಲೀಸರು ಹೇಳಿದರು.

‘ಡಿಕ್ಕಿಯ ರಭಸಕ್ಕೆ ಟ್ರಕ್ ಸಂಪೂರ್ಣ ನಜ್ಜುಗುಜ್ಜಾಯಿತು.

ಲಾರಿನ ಹಿಂಭಾಗ ಸಹ ಜಖಂಗೊಂಡಿತು. ಟ್ರಕ್‌ ಒಳಗೆಯೇ ಸಿಲುಕಿ ತೀವ್ರವಾಗಿ ಗಾಯಗೊಂಡ ಮಂಜುನಾಥ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಪ್ರತ್ಯಕ್ಷದರ್ಶಿಯೊಬ್ಬರ ಹೇಳಿಕೆ ಪಡೆಯಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT