ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ– ಧಾರವಾಡದ ಮಹಾಜನತೆಗೆ ಅವರು ಸ್ವಚ್ಛತೆಯ ಸಂದೇಶ ನೀಡಲಿದ್ದಾರೆ. ಮೇಯರ್ ಸುಧೀರ್ ಸರಾಫ್ ಸೇರಿದಂತೆ ಸಂಸದರು, ಶಾಸಕರು ಉಪಸ್ಥಿತರಿರುವರು. ಜನರಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪಾಲಿಕೆ ಹಲವಾರು ಕ್ರಮ ಕೈಗೊಂಡಿದೆ. ಕರಪತ್ರಗಳನ್ನು ಈಗಾಗಲೇ ಮುದ್ರಿಸಲಾಗಿದ್ದು, ಅವುಗಳನ್ನು ಹಂಚಲಾಗುವುದು ಎಂದರು.