ಉಪನಿಷತ್ತಿನ ಕಾಲದ ಋಷಿಗಳಿರಲಿ, ಶಂಕರರಾಗಲಿ ದೇವರ ಬಗ್ಗೆ ಮಾತನಾಡಲಿಲ್ಲ. ವಿಶ್ವ ಚೈತನ್ಯಕ್ಕೂ ಮಾನವನಿಗೂ ಇರುವ ಸಂಬಂಧದ ಬಗ್ಗೆ ಚಿಂತಿಸಿದರು. ಪ್ರಶ್ನೋತ್ತರ, ಸಂವಾದದ ಮೂಲಕ ಅಂತಿಮ ಸತ್ಯದ ರಹಸ್ಯವನ್ನು ಅನಾವರಣಗೊಳಿಸುತ್ತಾ ಹೋದರು. ಈ ಕುರಿತ ಚರ್ಚೆ ನಡೆಸಲೆಂದೇ ಆಗಿನ ಕಾಲದಲ್ಲಿ ದೇಶದ ಹಲವು ಕಡೆಗಳಲ್ಲಿ ಶಾಸ್ತ್ರಾರ್ಥಗಳನ್ನು ನಡೆಸುತ್ತಿದ್ದರು ಎಂದು ಅವರು ಹೇಳಿದರು.