ಸಂಜೆ 5.30ಕ್ಕೆ ಆರಂಭಗೊಳ್ಳುವ ಈ ವಿಶೇಷ ರಸಮಂಜರಿ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರಾದ ಎಸ್.ಪಿ.ಬಾಲಸುಬ್ರಹ್ಮಣ್ಯ, ಗುರುಕಿರಣ್, ರಾಜೇಶ್ ಕೃಷ್ಣನ್, ಅರ್ಜುನ್ ಜನ್ಯ, ಮಂಜುಳಾ ಗುರುರಾಜ್, ಅರ್ಚನಾ ಉಡುಪ, ಅನುರಾಧಾ ಭಟ್ ಅವರು ಗಾನಸುಧೆ ಹರಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸುಮಲತಾ ಅಂಬರೀಷ್, ಚಿತ್ರರಂಗದ ನಟ–ನಟಿಯರು, ನಿರ್ಮಾಪಕರು, ನಿರ್ದೇಶಕರು ಮತ್ತು ತಂತ್ರಜ್ಞರು ಭಾಗವಹಿಸಲಿದ್ದಾರೆ. ಹಿರಿಯ ನಟರಾದ ಶಿವರಾಂ ಅವರಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಲಿದೆ.