ಈ ಪ್ರಶಸ್ತಿಯು ₹1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಈ ವಿಷಯವನ್ನು ಶನಿವಾರ ತಿಳಿಸಿದ ಟ್ರಸ್ಟ್ ಅಧ್ಯಕ್ಷ ಡಾ. ಡಿ.ಎಂ. ಹಿರೇಮಠ, ‘ಡಾ. ಗುರುಲಿಂಗ ಕಾಪಸೆ ಅವರ ಅಧ್ಯಕ್ಷತೆಯ ಸಮಿತಿಯು 2019ನೇ ಸಾಲಿನ ಪ್ರಶಸ್ತಿಗೆ ಡಾ. ಭೈರಪ್ಪ ಅವರ ಹೆಸರನ್ನು ಅಂತಿಮಗೊಳಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಭೈರಪ್ಪ ಅವರೊಂದಿಗೆ ಸಾಹಿತ್ಯ ಸಂವಾದ ಜ. 31ರಂದು ಇಲ್ಲಿನ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಜರುಗಲಿದೆ’ ಎಂದರು.