ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಎಂ.ಜಯಮ್ಮ ಮಾತನಾಡಿ,‘26ರಂದು ಬೆಳಿಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ
ದಿಂದ ಸ್ವಾಂತಂತ್ರ್ಯಉದ್ಯಾನವದವರೆಗೆ ಪ್ರತಿಭಟನಾ ರ್ಯಾಲಿಯ ಮೂಲಕ ತೆರಳಿ,ಅಹೋರಾತ್ರಿ ಧರಣಿ ನಡೆಸಲಾಗುವುದು. ಅಂಗನವಾಡಿಗಳಿಗೆ ಮಾರಕವಾಗಿರುವ ನೂತನ ಶಿಕ್ಷಣ ನೀತಿಯನ್ನು ಕೇಂದ್ರ ಸರ್ಕಾರ ಕೈಬಿಡಬೇಕು.ಸೇವಾ ಹಿರಿತನವನ್ನು ಪರಿಗಣಿಸುವ ಮೂಲಕ ವರ್ಷಕ್ಕೆ ₹ 200 ಭತ್ಯೆ ಹೆಚ್ಚಳ, ವೈದ್ಯಕೀಯ ಸೌಲಭ್ಯ, ರಜೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಮನವಿಸಲ್ಲಿಸಲಾಗುವುದು. ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ’ ಎಂದರು.