ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಕ್ರಿಸ್ಟಿ ಅಬ್ರಹಾಂ, ‘ಸಂಸ್ಥೆಯು 60 ವರ್ಷಗಳನ್ನು ಪೂರೈಸಿದ್ದು,ಅಂಗವಿಕಲರ ಸಬಲೀಕರಣಕ್ಕಾಗಿ ಶ್ರಮಿಸುತ್ತಿದೆ. ದೇಶದಲ್ಲಿ ಅಂಗವಿಕಲರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವಸಂಘ–ಸಂಸ್ಥೆಗಳನ್ನು ಗುರುತಿಸಿ, ಪ್ರಶಸ್ತಿ ನೀಡಲಾಗುವುದು.ಈ ಪ್ರಶಸ್ತಿಯು ₹ 1 ಲಕ್ಷ ನಗದು ಬಹುಮಾನ ಒಳಗೊಂಡಿದೆ. ಕಾರ್ಯಕ್ರಮದ ದಿನದಂದೇ ಪ್ರಶಸ್ತಿ ವಿಜೇತರನ್ನು ಘೋಷಿಸಲಾಗುವುದು’ ಎಂದು ತಿಳಿಸಿದರು.