‘ಗದಗ ಜಿಲ್ಲೆಯ ಗೌಸುದ್ದೀನ್, ಜಾಲ ಹೋಬಳಿಯ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಟೀಂ ಲೀಡರ್ ಆಗಿದ್ದಾನೆ. ಈತನ ವಿರುದ್ಧ ಅದೇ ಹೋಬಳಿಯ ಎನ್.ಜಗದೀಶ್ ಎಂಬುವರು ಗುರುವಾರ ದೂರು ಕೊಟ್ಟಿದ್ದರು. ‘ಅಭಿನಂದನ್ ಭಾರತೀಯ ಮಾಧ್ಯಮಗಳ ವಿರುದ್ಧವಾಗಿ ಮಾತನಾಡಿದರು ಎನ್ನಲಾದ ವಿಡಿಯೊವೊಂದು ‘ಐಐಆರ್ಸಿ’ ಹೆಸರಿನ ಫೇಸ್ಬುಕ್ ಪೇಜ್ನಲ್ಲಿತ್ತು. ಅದಕ್ಕೆ ಪ್ರತಿಕ್ರಿಯಿಸಿದ್ದ ಗೌಸುದ್ದೀನ್, ‘ಅಭಿನಂದನ್ ದೇಶದ ಮಾಧ್ಯಮಗಳಿಗೆ ಸರಿಯಾಗಿಯೇ ಕಪಾಳ ಮೋಕ್ಷ ಮಾಡಿದರು. ಪಾಕಿಸ್ತಾನಕ್ಕೆ ಜಿಂದಾಬಾದ್. ಪಾಕ್ ಆರ್ಮಿಗೆ ಜಿಂದಾಬಾದ್’ ಎಂದು ಪ್ರತಿಕ್ರಿಯಿಸಿದ್ದ. ಅದನ್ನು ನೋಡಿ ಸ್ನೇಹಿತರು ನನಗೆ ವಿಷಯ ತಿಳಿಸಿದರು’ ಎಂದು ಜಗದೀಶ್ ದೂರಿನಲ್ಲಿ ಹೇಳಿದ್ದಾರೆ.