ಹೊಸ ಆಟೊ ರಿಕ್ಷಾಗಳಿಗೆ ನೀಡಲಾಗುತ್ತಿರುವ ಪರವಾನಗಿ ಪ್ರಶ್ನಿಸಿ ನಗರದ ನಿತಿನ್ ಆರ್.ಪುತ್ತಿಗೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿ, ಈ ಮಧ್ಯಂತರ ಆದೇಶ ನೀಡಿದೆ.