ತನ್ನ ಪಾಲಿಗೆ ಬಂದಿರುವ 20 ಕ್ಷೇತ್ರಗಳ ಪೈಕಿ 18 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಶನಿವಾರ ರಾತ್ರಿ ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಆದರೆ, ಬೆಂಗಳೂರು ದಕ್ಷಿಣ ಹಾಗೂ ಧಾರವಾಡ ಕ್ಷೇತ್ರಗಳಿಗೆ ಹೆಸರನ್ನು ಘೋಷಿಸಿರಲಿಲ್ಲ. ಬೆಂಗಳೂರು ದಕ್ಷಿಣದಿಂದ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸಲಿದ್ದಾರೆ ಎನ್ನುವ ವದಂತಿ ಹಬ್ಬಿರುವ ಕಾರಣ ಕಾದುನೋಡುವ ತಂತ್ರಕ್ಕೆ ಕಾಂಗ್ರೆಸ್ ಮೊರೆ ಹೋಗಿತ್ತು. ಆದರೆ, ಭಾನುವಾರ ಸಂಜೆ ಹರಿಪ್ರಸಾದ್ ಹೆಸರಿಗೆ ಹಸಿರುನಿಶಾನೆ ತೋರಿಸಿದೆ.