ಬೆಂಗಳೂರು: ‘ಬಡವರ ಬಂಧು’ ಯೋಜನೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಶವಂತಪುರದ ಹೂವು ಹಣ್ಣು ಹಾಗೂ ತರಕಾರಿ ಮಾರುಕಟ್ಟೆಯಲ್ಲಿ ಇದೇ 22ರಂದು ಬೆಳಿಗ್ಗೆ 11ಕ್ಕೆ ಚಾಲನೆ ನೀಡಲಿದ್ದಾರೆ.
ಬೀದಿ ವ್ಯಾಪಾರಿಗಳಿಗೆ ಶೂನ್ಯಬಡ್ಡಿ ದರದಲ್ಲಿ ದಿನಕ್ಕೆ ₹ 10 ಸಾವಿರದವರೆಗೆ ಸಾಲ ನೀಡುವ ಯೋಜನೆ ಇದಾಗಿದೆ. ಪ್ರಸಕ್ತ ಸಾಲಿನಲ್ಲಿ 53 ಸಾವಿರ ಮಂದಿಗೆ ಸಾಲ ನೀಡಲು ಸರ್ಕಾರ ನಿರ್ಧರಿಸಿದೆ.