ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಗಂಗಾಧರನಾಥ ಮೇಲ್ಸೇತುವೆ: ಇಂದಿನಿಂದ ವಾಹನ ಸಂಚಾರಕ್ಕೆ ಅವಕಾಶ

ಪುರಭವನ –ಮೈಸೂರು ರಸ್ತೆ ಮಾರ್ಗ
Last Updated 7 ಫೆಬ್ರುವರಿ 2019, 19:58 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಗಂಗಾಧರನಾಥ ಮೇಲ್ಸೇತುವೆ ರಸ್ತೆಯ ಒಂದು ಪಾರ್ಶ್ವದಲ್ಲಿ ಶುಕ್ರವಾರ ಸಂಜೆಯಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಪಾಲಿಕೆ ಮುಂದಾಗಿದೆ.

‘ಮೇಲ್ಸೇತುವೆಯಲ್ಲಿ ಒಂದು ಪಾರ್ಶ್ವದ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಪುರಭವನ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಚಲಿಸುವ ವಾಹನಗಳು ಈ ಮೇಲ್ಸೇತುವೆ ಮೇಲೆ ಸಂಚರಿಸುವುದಕ್ಕೆ ಶುಕ್ರವಾರ ಸಂಜೆ ಬಳಿಕ ಅವಕಾಶ ಮಾಡಿಕೊಡುತ್ತೇವೆ’ ಎಂದು ಪಾಲಿಕೆ ಮುಖ್ಯ ಎಂಜಿನಿಯರ್‌ (ಯೋಜನೆ) ಕೆ.ಟಿ.ನಾಗರಾಜ್‌ ತಿಳಿಸಿದ್ದಾರೆ.

2018ರ ಡಿಸೆಂಬರ್‌ ಅಂತ್ಯದಲ್ಲಿ ಈ ಮೇಲ್ಸೇತುವೆಯ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಕಾಮಗಾರಿಯ ಸಂದರ್ಭದಲ್ಲಿ ಪುರಭವನದಿಂದ ಮೈಸೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಕೆ.ಆರ್‌. ಮಾರುಕಟ್ಟೆ ರಸ್ತೆ ಮೂಲಕ ಸಾಗುತ್ತಿದ್ದವು.

ಮೈಸೂರು ರಸ್ತೆ ಕಡೆಯಿಂದ ಪುರಭವನದ ಕಡೆಗಿನ ರಸ್ತೆಯ ಡಾಂಬರೀಕರಣ ನಡೆಯುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತಿದೆ. ಈ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT