ಬೆಂಗಳೂರು: ಪ್ರಕೃತಿ ವಿಕೋಪ ಸಂತ್ರಸ್ತರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ‘ದಿ ಬೆಂಗಳೂರು ಆಸ್ಪತ್ರೆ’ ವತಿಯಿಂದ ₹ 10 ಲಕ್ಷ ದೇಣಿಗೆ ನೀಡಲಾಗಿದೆ.
ಷೇರುದಾರರು, ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದಿಂದ ಸಂಗ್ರಹಿಸಲಾದ ಈ ದೇಣಿಗೆಯ ಚೆಕ್ ಅನ್ನು ಇತ್ತೀಚೆಗೆ ಆಸ್ಪತ್ರೆಯ ಅಧ್ಯಕ್ಷ ಡಾ.ಕೆ.ಎಸ್.ಶೇಖರ್, ವ್ಯವಸ್ಥಾಪಕ ನಿರ್ದೇಶಕ ಡಾ.ಹೇಮಚಂದ್ರ ಶೆಟ್ಟಿ ಮತ್ತು ಪಾಪಣ್ಣ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಿಧಾನಸೌಧದಲ್ಲಿ ನೀಡಿದರು.
ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಈ ಸಂದರ್ಭದಲ್ಲಿ ಹಾಜರಿದ್ದರು.