ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 54 ನೇ ಘಟಿಕೋತ್ಸವ ಏಪ್ರಿಲ್ 22 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಘಟಿಕೋತ್ಸವ ಭಾಷಣ ಮಾಡುವರು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.
ದೂರ ಶಿಕ್ಷಣಕ್ಕೆ ಪ್ರವೇಶ: ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ 2018–19 ನೇ ಸಾಲಿಗೆ ಬಿ.ಎ, ಬಿ.ಕಾಂ, ಬಿಬಿಎಂ ಪದವಿ ಮತ್ತು ಸ್ನಾತಕೋತ್ತರ ಪದವಿಗಳಾದ ಎಂಎ,ಎಂಕಾಂ,ಎಂಎಸ್ಸಿಗೆ ನೋಂದಾಯಿಸಿಕೊಳ್ಳಲು ಏಪ್ರಿಲ್ 15 ರವರೆಗೆ ಅವಕಾಶ ನೀಡಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ವಿಳಂಬ ಶುಲ್ಕದೊಂದಿಗೆ ಅರ್ಜಿ ಶುಲ್ಕವನ್ನು (ಒಟ್ಟು ₹1000) ಪ್ರವೇಶಾತಿ ಶುಲ್ಕದ ಜೊತೆಗೆ ಪಡೆದು ನೇರವಾಗಿ ನಿರ್ದೇಶನಾಲಯದಲ್ಲಿ ಪ್ರವೇಶ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.