ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆಂಪೇಗೌಡರು ಜಾತ್ಯತೀತ ನಾಯಕ’

ಜಾತಿಗೆ ಸೀಮಿತಗೊಳಿಸುವ ಪ್ರಯತ್ನ: ಅನ್ನದಾನನಾಥ ಸ್ವಾಮೀಜಿ ಬೇಸರ
Last Updated 12 ಸೆಪ್ಟೆಂಬರ್ 2019, 20:23 IST
ಅಕ್ಷರ ಗಾತ್ರ

ಬೆಂಗಳೂರು: ‘ನಾಡಪ್ರಭು ಕೆಂಪೇಗೌಡ ಅವರನ್ನು ಸರ್ಕಾರಗಳು ಹಾಗೂಆಧ್ಯಾತ್ಮಿಕ ಕೇಂದ್ರಗಳು ಒಂದು ಜಾತಿಗೆ ಸೀಮಿತಗೊಳಿಸುವ ಮೂಲಕಜಾತ್ಯತೀತ ನಾಯಕನನ್ನು ಸಂಕುಚಿತಗೊಳಿಸುತ್ತಿವೆ’ ಎಂದು ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಅನ್ನದಾನನಾಥ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದ ನಾಡಪ್ರಭು ಕೆಂಪೇಗೌಡ ಮಾನವಿಕ ಮತ್ತು ಸಮಾಜ ವಿಜ್ಞಾನಗಳ ಕೇಂದ್ರ ನಗರದಲ್ಲಿ ಗುರುವಾರ ಆಯೋಜಿಸಿದ್ದ ‘ಬೆಂಗಳೂರಿನ ಇತಿಹಾಸ ಮತ್ತು ಪರಂಪರೆ’ ರಾಷ್ಟ್ರೀಯ ವಿಚಾರಸಂಕಿರಣ ದಲ್ಲಿ ಮಾತನಾಡಿದರು.

‘ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ಅಂದೇ ನಗರದ ಸಮಗ್ರ ಅಭಿವೃದ್ಧಿಗೆ ಪೂರಕವಾದ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದರು. ಅವರ ವಿಚಾರಧಾರೆ ಹಾಗೂ ಆದರ್ಶಗಳು ಪ್ರತಿಯೊಬ್ಬರಿಗೂ ಅನುಕರಣೀಯ. ಇಂತಹ ಮಹಾನ್‌ ನಾಯಕನ ಪುತ್ಥಳಿ ಹಾಗೂ ಮ್ಯೂಸಿಯಂಗಳನ್ನು ಸರ್ಕಾರ ನಿರ್ಮಿಸಬೇಕು’ ಎಂದು ಆಗ್ರಹಿಸಿದರು.

‘ಗ್ರಂಥ, ತಾಳೆಗರಿ ಹಾಗೂ ಶಾಸನಗಳ ಮೂಲಕ ಕೇಂಪೇಗೌಡರ ಬಗ್ಗೆ ಅಧ್ಯಯನಗಳು ನಡೆದಿವೆ. ಇನ್ನಷ್ಟು ಸಂಶೋಧನೆಗಳನ್ನು ನಡೆಸಿ, ಸಮಗ್ರ ಸಂಪುಟ ಹೊರತರಬೇಕು’ ಎಂದರು.

ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್. ವೇಣುಗೋಪಾಲ್, ‘ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರ ಕೊಡುಗೆ ಅಪಾರ. ನಗರದಲ್ಲಿ ಸಾವಿರಾರು ಕೆರೆಗಳಿದ್ದವು. ಆದರೆ, ನಗರೀಕರಣದ ನೆಪದಲ್ಲಿ ಪ್ರಾಕೃತಿಕ ಸಂಪತ್ತನ್ನು ನಾಶಮಾಡಲಾಯಿತು. ಇದೀಗ ಕೆರೆಗಳು ಕಣ್ಮರೆಯಾಗುತ್ತಿವೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ಉದ್ಯಾನ ನಗರಿ ಎಂದು ಪ್ರಸಿದ್ಧವಾಗಿದ್ದ ಬೆಂಗಳೂರಿನಲ್ಲಿ ಕಸದ ಸಮಸ್ಯೆ ತಲೆದೋರಿದೆ. ವಿವಿಯಲ್ಲಿ ಹೊಸದಾಗಿ ಕಸ ನಿರ್ವಹಣಾ ಕೋರ್ಸ್ ಹಾಗೂ ವಿಪತ್ತು ನಿರ್ವಹಣಾ ಕೋರ್ಸ್‌ಗಳನ್ನು ಆರಂಭಿಸಲಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT