ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾರ್ಯಕ್ರಮವನ್ನು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಲಿದ್ದಾರೆ. ಬಸವಶ್ರೀ ಪ್ರಶಸ್ತಿಗೆ ಬಾಹ್ಯಾಕಾಶ ವಿಜ್ಞಾನಿ ಎ.ಎಸ್.ಕಿರಣ್ಕುಮಾರ್ ಹಾಗೂ ವಚನ ಸಾಹಿತ್ಯಶ್ರೀ ಪ್ರಶಸ್ತಿಗೆ ಕವಿ ಜರಗನಹಳ್ಳಿ ಶಿವಶಂಕರ್ ಹಾಗೂ ಸಾಹಿತಿ ಡಾ.ನಾ.ಮೊಗಸಾಲೆ ಆಯ್ಕೆಯಾಗಿದ್ದಾರೆ.ವಚನ ಸಾಹಿತ್ಯಶ್ರೀ ಪ್ರಶಸ್ತಿ ಪುರಸ್ಕೃತರಿಗೆ ತಲಾ ₹ 10 ಸಾವಿರ ಬಹುಮಾನ ನೀಡಲಾಗುವುದು ಎಂದರು.