<p><strong>ನೆಲಮಂಗಲ:</strong> ಬಸವಣ್ಣ ದೇವರ ಮಠದಲ್ಲಿ ಬಸವೇಶ್ವರರ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವಕ್ಕೆ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ರಥವನ್ನು ಎಳೆಯುತ್ತಿದ್ದಂತೆ ಭಕ್ತರು ಹೂಗಳನ್ನು ಚೆಲ್ಲಿ ಭಕ್ತಿ ಮೆರೆದರು. ಬಂಡೆಮಠದ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಚಂಡೆಮದ್ದಳೆ, ಕಂಸಾಳೆ, ನಗಾರಿ, ನಂದಿಧ್ವಜದ ಜನಪದ ಕಲಾ ಪ್ರಕಾರಗಳೊಂದಿಗೆ, ಭಕ್ತರ ಜಯಘೋಷಗಳೊಂದಿಗೆ ರಥೋತ್ಸವ ಸಾಗಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<p>ಅಶ್ವಾರೂಢ ಬಸವೇಶ್ವರರ ದೊಡ್ಡ ಕಂಚಿನ ಪ್ರತಿಮೆಯನ್ನು ಹಾಗೂ ಸುತ್ತಮುತ್ತಲ ಹಳ್ಳಿಗಳಿಂದ ತಂದಿದ್ದ ಉತ್ಸವ ಬಸವಣ್ಣರನ್ನು ಜನಪದ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಜೆ ಮೆರವಣಿಗೆ ಮಾಡಲಾಯಿತು.</p>.<p class="Briefhead"><strong>ಬಸವ ಜಯಂತಿ</strong></p>.<p><strong>ಯಲಹಂಕ: </strong>ರೇಣುಕಾದಿ ಪಂಚಚಾರ್ಯ ವೀರಶೈವ ಸಮಿತಿಯು ಆನಂದರಾಮ ಭಜನಾಮಂಡಳಿ ಮಂಟಪದಲ್ಲಿ ಬಸವ ಜಯಂತಿ ಆಚರಿಸಿತು.</p>.<p>ಭಕ್ತರು ಬಸವಣ್ಣ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿದರು. ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಬಸವಣ್ಣರ ಭಾವಚಿತ್ರದ ಮೆರವಣಿಗೆ ಸಂಜೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ:</strong> ಬಸವಣ್ಣ ದೇವರ ಮಠದಲ್ಲಿ ಬಸವೇಶ್ವರರ ರಥೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.</p>.<p>ರಥೋತ್ಸವಕ್ಕೆ ಮಠದ ಅಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಚಾಲನೆ ನೀಡಿದರು. ರಥವನ್ನು ಎಳೆಯುತ್ತಿದ್ದಂತೆ ಭಕ್ತರು ಹೂಗಳನ್ನು ಚೆಲ್ಲಿ ಭಕ್ತಿ ಮೆರೆದರು. ಬಂಡೆಮಠದ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು.</p>.<p>ಚಂಡೆಮದ್ದಳೆ, ಕಂಸಾಳೆ, ನಗಾರಿ, ನಂದಿಧ್ವಜದ ಜನಪದ ಕಲಾ ಪ್ರಕಾರಗಳೊಂದಿಗೆ, ಭಕ್ತರ ಜಯಘೋಷಗಳೊಂದಿಗೆ ರಥೋತ್ಸವ ಸಾಗಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<p>ಅಶ್ವಾರೂಢ ಬಸವೇಶ್ವರರ ದೊಡ್ಡ ಕಂಚಿನ ಪ್ರತಿಮೆಯನ್ನು ಹಾಗೂ ಸುತ್ತಮುತ್ತಲ ಹಳ್ಳಿಗಳಿಂದ ತಂದಿದ್ದ ಉತ್ಸವ ಬಸವಣ್ಣರನ್ನು ಜನಪದ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಜೆ ಮೆರವಣಿಗೆ ಮಾಡಲಾಯಿತು.</p>.<p class="Briefhead"><strong>ಬಸವ ಜಯಂತಿ</strong></p>.<p><strong>ಯಲಹಂಕ: </strong>ರೇಣುಕಾದಿ ಪಂಚಚಾರ್ಯ ವೀರಶೈವ ಸಮಿತಿಯು ಆನಂದರಾಮ ಭಜನಾಮಂಡಳಿ ಮಂಟಪದಲ್ಲಿ ಬಸವ ಜಯಂತಿ ಆಚರಿಸಿತು.</p>.<p>ಭಕ್ತರು ಬಸವಣ್ಣ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ನೆರವೇರಿಸಿದರು. ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಬಸವಣ್ಣರ ಭಾವಚಿತ್ರದ ಮೆರವಣಿಗೆ ಸಂಜೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>