‘ಯೋಜನೆಗಳನ್ನು ಅಥವಾ ಕಾಮಗಾರಿಗಳನ್ನು ಪ್ರಚಾರ ಮಾಡುವಾಗ ರಾಷ್ಟ್ರಪತಿ, ಪ್ರಧಾನಿ, ಮುಖ್ಯನ್ಯಾಯಮೂರ್ತಿ, ಕೇಂದ್ರ ಸಚಿವರು, ಮುಖ್ಯಮಂತ್ರಿ, ರಾಜ್ಯ ಸರ್ಕಾರದ ಸಚಿವರು ಹಾಗೂ ರಾಷ್ಟ್ರದ ಪಿತಾಮಹರ ಭಾವಚಿತ್ರಗಳನ್ನು ಹೊರತುಪಡಿಸಿ ಬೇರಾವುದೇ ವ್ಯಕ್ತಿಗಳ ಭಾವಚಿತ್ರ ಮುದ್ರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಹಾಗಾಗಿ ಪಾಲಿಕೆ ವ್ಯಾಪ್ತಿಯ ಬಸ್ ನಿಲ್ದಾಣ, ಕುಡಿಯುವ ನೀರಿನ ಘಟಕ ಹಾಗೂ ಪಾಲಿಕೆ ಜಾಹೀರಾತುಗಳನ್ನು ಪ್ರದರ್ಶಿಸುವಾಗ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಆಗುವಂತೆ ನೋಡಕೊಳ್ಳಬೇಕು’ ಎಂದು ಪಾಲಿಕೆ ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.