ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯ ಕಾರ್ಯದರ್ಶಿ ಅವರು, ತನಿಖೆ ನಡೆಸಲು ನಗರಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಿದ್ದಾರೆ. ಬಿಬಿಎಂಪಿ ಮಹದೇವಪುರ ವಲಯ ಅಧಿಕಾರಿಗಳು ಮತ್ತು ಬೆಸ್ಕಾಂ ಅಧಿಕಾರಿಗಳಿಗೆ ನೋಟಿಸ್ ನೀಡಿರುವ ನಗರಾಭಿವೃದ್ಧಿ ಇಲಾಖೆ, ವಿಚಾರಣೆ ಆರಂಭಿಸಿದೆ. ಈ ದಂಧೆ ಬಗ್ಗೆ ಏಪ್ರಿಲ್ 27ರಂದು ‘ಪ್ರಜಾವಾಣಿ’ ವರದಿ ಪ್ರಕಟಿಸಿತ್ತು.