ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಾರ್ವಜನಿಕ ವಲಯದ ಬ್ಯಾಂಕುಗಳು ಬಿಬಿಎಂಪಿಗೆ ಸಾಲ ನೀಡುತ್ತವೆ. ಈ ಬಗ್ಗೆ ಅಂಕಿ ಅಂಶಗಳನ್ನು ಪಾಲಿಕೆ ಸಂಗ್ರಹಿಸಬೇಕು. ಈ ಸಂಬಂಧ ಪಾಲಿಕೆ ಲೆಕ್ಕ ಪರಿಶೋಧನೆಯಲ್ಲಿ ಸೂಕ್ತ ಮಾಹಿತಿ ಇಲ್ಲವಾಗಿದೆ. ಅಲ್ಲದೆ, ಲೆಕ್ಕ ಪತ್ರಗಳನ್ನು ನಿರ್ವಹಣೆ ಮಾಡುತ್ತಿಲ್ಲ. ಈ ಪ್ರಕರಣದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ’ ಎಂದು ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಬಿಬಿಎಂಪಿಯ ಆಂತರಿಕ ಲೆಕ್ಕ ಪರಿಶೋಧನೆಗೆ ಸಂಬಂಧಿಸಿದ ವಿವರಗಳನ್ನು ಸಲ್ಲಿಸಿ ಎಂದು ಸೂಚಿಸಿ, ವಿಚಾರಣೆಯನ್ನು 2019ರ ಜನವರಿ 30ಕ್ಕೆ ಮುಂದೂಡಿತು.