<p><strong>ಬೆಂಗಳೂರು:</strong> ಕೊರೊನಾ ಸೋಂಕು ಹೆಚ್ಚುತ್ತಿರುವ ಸಮಯದಲ್ಲೂ ಸೇವೆಯಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ಪಾಲಿಕೆ ಅಗತ್ಯ ಸೌಕರ್ಯ ಕಲ್ಪಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘವು ಮಂಗಳವಾರದಿಂದ ಅನಿರ್ದಿಷ್ಟ ಹೋರಾಟ ಆರಂಭಿಸಿದೆ.</p>.<p>ಈಗಾಗಲೇ ಐವರು ಪೌರಕಾರ್ಮಿಕರು ಕೊರೊನಾ ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢವಾಗಿದೆ. ಇಂತಹ ವಾತಾವರಣ ಇದ್ದರೂ ಪೌರಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಪಾಲಿಕೆ ನಿರ್ಲಕ್ಷಿಸಿದೆ ಎಂದು ದೂರಿದೆ.</p>.<p>ಪೌರಕಾರ್ಮಿಕರಿಗೆ ಕಡ್ಡಾಯವಾಗಿ ಕೊರೊನಾ ತಪಾಸಣೆ ನಡೆಸಬೇಕು. ಸುರಕ್ಷತೆಗೆ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು. ಕಸದ ಗಾಡಿಗಳಿಗೆ ಸೋಂಕುನಿವಾರಕ ಸಿಂಪಡಣೆ ಮಾಡಬೇಕು. ನಗರದ ಪ್ರತಿ ವಲಯದಲ್ಲಿ ಸ್ನಾನಗೃಹ, ಶೌಚಾಲಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದೆ.</p>.<p>ಥರ್ಮಲ್ ಸ್ಕ್ಯಾನಿಂಗ್, ಆರೋಗ್ಯ ಶಿಬಿರಗಳು, ಪೌರಕಾರ್ಮಿಕರ ನೆರವಿಗೆ ಸಹಾಯವಾಣಿ ಆರಂಭಿಸಬೇಕು. ಬಾಕಿ ವೇತನ, ಸಾರಿಗೆ ಭತ್ಯೆ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.</p>.<p>ಪ್ರತಿದಿನ ಬೆಳಿಗ್ಗೆ 6.30 ಹಾಗೂ 11.30ಕ್ಕೆ ಎಲ್ಲ ವಲಯಗಳಲ್ಲಿ ಪೌರಕಾರ್ಮಿಕರು ಪ್ರತಿಭಟನೆಯಲ್ಲಿ ಕೂರಲಿದ್ದಾರೆ. ಬಳಿಕ ಕಪ್ಪು ಬಟ್ಟೆ ಕಟ್ಟಿಕೊಂಡು ಕೆಲಸ ಮುಂದುವರಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ಸೋಂಕು ಹೆಚ್ಚುತ್ತಿರುವ ಸಮಯದಲ್ಲೂ ಸೇವೆಯಲ್ಲಿ ತೊಡಗಿರುವ ಪೌರಕಾರ್ಮಿಕರಿಗೆ ಪಾಲಿಕೆ ಅಗತ್ಯ ಸೌಕರ್ಯ ಕಲ್ಪಿಸಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘವು ಮಂಗಳವಾರದಿಂದ ಅನಿರ್ದಿಷ್ಟ ಹೋರಾಟ ಆರಂಭಿಸಿದೆ.</p>.<p>ಈಗಾಗಲೇ ಐವರು ಪೌರಕಾರ್ಮಿಕರು ಕೊರೊನಾ ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. 50ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢವಾಗಿದೆ. ಇಂತಹ ವಾತಾವರಣ ಇದ್ದರೂ ಪೌರಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೆ ಪಾಲಿಕೆ ನಿರ್ಲಕ್ಷಿಸಿದೆ ಎಂದು ದೂರಿದೆ.</p>.<p>ಪೌರಕಾರ್ಮಿಕರಿಗೆ ಕಡ್ಡಾಯವಾಗಿ ಕೊರೊನಾ ತಪಾಸಣೆ ನಡೆಸಬೇಕು. ಸುರಕ್ಷತೆಗೆ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್ ವಿತರಿಸಬೇಕು. ಕಸದ ಗಾಡಿಗಳಿಗೆ ಸೋಂಕುನಿವಾರಕ ಸಿಂಪಡಣೆ ಮಾಡಬೇಕು. ನಗರದ ಪ್ರತಿ ವಲಯದಲ್ಲಿ ಸ್ನಾನಗೃಹ, ಶೌಚಾಲಯ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದೆ.</p>.<p>ಥರ್ಮಲ್ ಸ್ಕ್ಯಾನಿಂಗ್, ಆರೋಗ್ಯ ಶಿಬಿರಗಳು, ಪೌರಕಾರ್ಮಿಕರ ನೆರವಿಗೆ ಸಹಾಯವಾಣಿ ಆರಂಭಿಸಬೇಕು. ಬಾಕಿ ವೇತನ, ಸಾರಿಗೆ ಭತ್ಯೆ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದೆ.</p>.<p>ಪ್ರತಿದಿನ ಬೆಳಿಗ್ಗೆ 6.30 ಹಾಗೂ 11.30ಕ್ಕೆ ಎಲ್ಲ ವಲಯಗಳಲ್ಲಿ ಪೌರಕಾರ್ಮಿಕರು ಪ್ರತಿಭಟನೆಯಲ್ಲಿ ಕೂರಲಿದ್ದಾರೆ. ಬಳಿಕ ಕಪ್ಪು ಬಟ್ಟೆ ಕಟ್ಟಿಕೊಂಡು ಕೆಲಸ ಮುಂದುವರಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>