12 ಸ್ಥಾಯಿ ಸಮಿತಿ ಸದಸ್ಯರ ಆಯ್ಕೆಗೆ 2018ರ ಡಿಸೆಂಬರ್ 5ರಂದು ಚುನಾವಣೆ ನಡೆದಿತ್ತು. 11 ಸ್ಥಾಯಿ ಸಮಿತಿಗಳಿಗೆ ಪೂರ್ಣಪ್ರಮಾಣದಲ್ಲಿ ( ತಲಾ 11 ಮಂದಿ ) ಸದಸ್ಯರು ಆಯ್ಕೆಯಾಗಿದ್ದರು. ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿಗೆ 9 ಸದಸ್ಯರು ಮಾತ್ರ ಆಯ್ಕೆ ಆಗಿದ್ದರು. ಕೊನೇನ ಅಗ್ರಹಾರ ವಾರ್ಡ್ ಸದಸ್ಯ ಎಂ.ಚಂದ್ರಪ್ಪ ರೆಡ್ಡಿ ಅವರನ್ನು ಈ ಸ್ಥಾಯಿ ಸಮಿತಿಗೆ ಅಧ್ಯಕ್ಷರನ್ನಾಗಿಸಲು ಮೈತ್ರಿಕೂಟವು ನಿರ್ಧರಿಸಿತ್ತು. ಆದರೆ, ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಯ್ಕೆ ಆಗಿರಲಿಲ್ಲ.