‘ಭವಿಷ್ಯದ ಬಗ್ಗೆ ಬಿಬಿಎಂಪಿ ಚಿಂತನೆ ನಡೆಸುತ್ತಿರುವುದನ್ನು ಸ್ವಾಗತಿಸುತ್ತೇವೆ. ಪಾಲಿಕೆಯು ಪ್ರತ್ಯೇಕ ಯೋಜನಾ ವಿಭಾಗವನ್ನು ಹೊಂದುವ ಅವಶ್ಯಕತೆ ಇದೆ. ಆದರೆ, ಈ ಯೋಜನೆ ರೂಪಿಸುವ ಪ್ರಕ್ರಿಯೆ ವಾರ್ಡ್ ಸಮಿತಿ, ಎಂಪಿಸಿಗಳ ಮೂಲಕ ಕೆಳಗಿನಿಂದ ಮೇಲಕ್ಕೆ ಹಂತ ಹಂತವಾಗಿ ನಡೆಯಬೇಕು’ ಎಂದು ವಿನಯ ಶ್ರೀನಿವಾಸ್ ಸಲಹೆ ನೀಡಿದ್ದಾರೆ.