ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಸಾರ್ವಜನಿಕರು ಅಧಿಕಾರಿಗಳನ್ನು ಭೇಟಿ ಮಾಡುವುದಕ್ಕೆ ಸಮಯ ನಿಗದಿಪಡಿಸಿದೆ.
ಕೆಲಸದ ದಿನಗಳಲ್ಲಿ ಮಧ್ಯಾಹ್ನ 3ರಿಂದ ಸಂಜೆ 5 ಗಂಟೆ ನಡುವೆ ಸಾರ್ವಜನಿಕರು ಅಧಿಕಾರಿಗಳನ್ನು ಅಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಿ ಅಹವಾಲುಗಳಿಗೆ ಪರಿಹಾರ ಪಡೆಯಬಹುದು ಎಂದು ಬಿಡಿಎ ಪ್ರಕಟಣೆ ತಿಳಿಸಿದೆ.
ಇದುವರೆಗೆ ಸಾರ್ವಜನಿಕರು ಬೆಳಿಗ್ಗೆ 11ರಿಂದ ಸಂಜೆ 5.30ರವರೆಗೂ ಅಧಿಕಾರಿಗಳನ್ನು ಭೇಟಿ ಮಾಡ ಬಹುದಾಗಿತ್ತು.
ಸಾರ್ವಜನಿಕರ ಕುಂದುಕೊರತೆ ಆಲಿಸಲು ಪ್ರಾಧಿಕಾರವು ಪ್ರತಿ ಬುಧವಾರವೂ ಸಭೆಗಳನ್ನು ಆಯೋಜಿಸುತ್ತಿತ್ತು. ಇನ್ನು ತಿಂಗಳ ಎರಡನೇ ಹಾಗೂ ನಾಲ್ಕನೇ ಬುಧವಾರ 3 ಗಂಟೆಗೆ ಕುಂದುಕೊರತೆ ಸಭೆಗಳನ್ನು ಹಮ್ಮಿಕೊಳ್ಳಲಿದೆ.