ಪಿಆರ್ಆರ್ ಹಾಗೂ ಶಿವರಾಮ ಕಾರಂತ ಬಡಾವಣೆಯ ಸಂತ್ರಸ್ತ ರೈತರು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಮಂಗಳವಾರ ಬೆಳಿಗ್ಗೆ ಆಹೋರಾತ್ರಿ ಧರಣಿ ಆರಂಭಿಸಿದ್ದರು. ಬಿಡಿಎ ಅಧ್ಯಕ್ಷ ಎಸ್.ಟಿ.ಸೋಮಶೇಖರ್ ಅವರು ಸ್ಥಳಕ್ಕೆ ತೆರಳಿ ಮಾತುಕತೆ ನಡೆಸಿದಾಗ, ‘ನಮ್ಮ ಬೇಡಿಕೆ ಈಡೇರಿಸುವ ಬಗ್ಗೆ ಮುಖ್ಯಮಂತ್ರಿ ಅಥವಾ ಉಪಮುಖ್ಯಮಂತ್ರಿಯವರಿಂದಲೇ ಖಚಿತ ಭರವಸೆ ಸಿಗದ ಹೊರತು ಧರಣಿ ನಿಲ್ಲಿಸುವುದಿಲ್ಲ’ ಎಂದು ಖಡಾಖಂಡಿತಾವಾಗಿ ಹೇಳಿದ್ದರು. ಹಾಗಾಗಿ ಬುಧವಾರವೂ ಧರಣಿ ಮುಂದುವರಿದಿತ್ತು. ರೈತರು ಮಧ್ಯಾಹ್ನವೂ ಧರಣಿಯ ಸ್ಥಳದಲ್ಲೇ ಅಡುಗೆ ಮಾಡಿ ಊಟ ಮಾಡಿದ್ದರು.