<p><strong>ಬೆಂಗಳೂರು:</strong> ಕಟ್ಟಡ ತ್ಯಾಜ್ಯವನ್ನು ಮಾರೇನಹಳ್ಳಿ ಕ್ವಾರಿಗೆ ಸುರಿಯದಿರಲು ಬಿಬಿಎಂಪಿ ನಿರ್ಧರಿಸಿರುವ ಬೆನ್ನಲ್ಲೇ ಬೆಳ್ಳಂದೂರು ಮತ್ತು ವರ್ತೂರು ಕೆರೆಯ ಹೂಳು ಈ ಕ್ವಾರಿ ಸೇರುವ ಸಾಧ್ಯತೆ ಇದೆ.</p>.<p>ಈ ಎರಡೂ ಕೆರೆಗಳ ಹೂಳು ಸುರಿಯಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಜಾಗಕ್ಕಾಗಿ ಹುಡುಕಾಟ ನಡೆಸುತ್ತಿದೆ. ಮಾರೇನಹಳ್ಳಿ ಕ್ವಾರಿ ಕೂಡ ಆಯ್ಕೆಯಾಗುವ ಸಾಧ್ಯತೆ ಇದ್ದು, ಅಂತಿಮವಾಗಿ ಪಾಲಿಕೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.</p>.<p>ಮಿಟ್ಟಗಾನಹಳ್ಳಿ ಮತ್ತು ಮಾರೇನ ಹಳ್ಳಿಕ್ವಾರಿಗೆ ತ್ಯಾಜ್ಯ ಸುರಿಯಲುಈ ಹಿಂದೆಘನ ತ್ಯಾಜ್ಯ ನಿರ್ವಹಣಾ ವಿಭಾಗ ನೀಡಿದ್ದ ಪ್ರಸ್ತಾವನೆಯನ್ನುತಾಂತ್ರಿಕ ಮಾರ್ಗದರ್ಶನ ಸಮಿತಿ ತಿರಸ್ಕರಿಸಿತ್ತು.</p>.<p>ಎರಡೂ ಕ್ವಾರಿಗಳು ಏಕಕಾಲದಲ್ಲಿ ಕಾರ್ಯನಿರ್ವಹಿಸುವುದು ಒಳ್ಳೆಯದಲ್ಲ. ಹೆಚ್ಚು ತ್ಯಾಜ್ಯ ಉತ್ಪತ್ತಿಗೆ ಪ್ರೋತ್ಸಾಹ ನೀಡಿದಂತೆ ಆಗಲಿದೆ ಎಂದು ಅದು ಅಭಿಪ್ರಾಯಪಟ್ಟಿತ್ತು.</p>.<p>ಬೆಳ್ಳಂದೂರು ಕೆರೆಯಿಂದ 60.60 ಲಕ್ಷ ಕ್ಯೂಬಿಕ್ ಮೀಟರ್ ಹಾಗೂ ವರ್ತೂರಿನಿಂದ 30.87 ಲಕ್ಷ ಕ್ಯೂಬಿಕ್ ಮೀಟರ್ನಷ್ಟು ಹೂಳು ಎತ್ತಲು ಯೋಜಿಸಲಾಗಿದೆ.</p>.<p>ಮೂಲಗಳ ಪ್ರಕಾರ, ಈ ಹೂಳನ್ನು 15 ಸಾವಿರ ಎಕರೆಗೂ ಹೆಚ್ಚು ಪ್ರದೇಶಕ್ಕೆ ಗೊಬ್ಬರವಾಗಿ ಬಳಸಬಹುದಾಗಿದೆ.</p>.<p>ಮಾರೇನಹಳ್ಳಿ ಕ್ವಾರಿ ಅಲ್ಲದೇ, ಎಲೆಕ್ಟ್ರಾನಿಕ್ ಸಿಟಿ ಬಳಿಯೂ ಎರಡು ಜಾಗಗಳಲ್ಲಿ ಒಟ್ಟು 10 ಎಕರೆ ಜಾಗವನ್ನು ಗುರುತಿಸಲಾಗಿದೆ. ಆನೇಕಲ್ ಬಳಿ ಗುರುತಿಸಿರುವ ಕ್ವಾರಿಯೊಂದರಲ್ಲಿ ಹೂಳು ಸುರಿಯುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಟ್ಟಡ ತ್ಯಾಜ್ಯವನ್ನು ಮಾರೇನಹಳ್ಳಿ ಕ್ವಾರಿಗೆ ಸುರಿಯದಿರಲು ಬಿಬಿಎಂಪಿ ನಿರ್ಧರಿಸಿರುವ ಬೆನ್ನಲ್ಲೇ ಬೆಳ್ಳಂದೂರು ಮತ್ತು ವರ್ತೂರು ಕೆರೆಯ ಹೂಳು ಈ ಕ್ವಾರಿ ಸೇರುವ ಸಾಧ್ಯತೆ ಇದೆ.</p>.<p>ಈ ಎರಡೂ ಕೆರೆಗಳ ಹೂಳು ಸುರಿಯಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಜಾಗಕ್ಕಾಗಿ ಹುಡುಕಾಟ ನಡೆಸುತ್ತಿದೆ. ಮಾರೇನಹಳ್ಳಿ ಕ್ವಾರಿ ಕೂಡ ಆಯ್ಕೆಯಾಗುವ ಸಾಧ್ಯತೆ ಇದ್ದು, ಅಂತಿಮವಾಗಿ ಪಾಲಿಕೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಬಿಬಿಎಂಪಿ ಮೂಲಗಳು ತಿಳಿಸಿವೆ.</p>.<p>ಮಿಟ್ಟಗಾನಹಳ್ಳಿ ಮತ್ತು ಮಾರೇನ ಹಳ್ಳಿಕ್ವಾರಿಗೆ ತ್ಯಾಜ್ಯ ಸುರಿಯಲುಈ ಹಿಂದೆಘನ ತ್ಯಾಜ್ಯ ನಿರ್ವಹಣಾ ವಿಭಾಗ ನೀಡಿದ್ದ ಪ್ರಸ್ತಾವನೆಯನ್ನುತಾಂತ್ರಿಕ ಮಾರ್ಗದರ್ಶನ ಸಮಿತಿ ತಿರಸ್ಕರಿಸಿತ್ತು.</p>.<p>ಎರಡೂ ಕ್ವಾರಿಗಳು ಏಕಕಾಲದಲ್ಲಿ ಕಾರ್ಯನಿರ್ವಹಿಸುವುದು ಒಳ್ಳೆಯದಲ್ಲ. ಹೆಚ್ಚು ತ್ಯಾಜ್ಯ ಉತ್ಪತ್ತಿಗೆ ಪ್ರೋತ್ಸಾಹ ನೀಡಿದಂತೆ ಆಗಲಿದೆ ಎಂದು ಅದು ಅಭಿಪ್ರಾಯಪಟ್ಟಿತ್ತು.</p>.<p>ಬೆಳ್ಳಂದೂರು ಕೆರೆಯಿಂದ 60.60 ಲಕ್ಷ ಕ್ಯೂಬಿಕ್ ಮೀಟರ್ ಹಾಗೂ ವರ್ತೂರಿನಿಂದ 30.87 ಲಕ್ಷ ಕ್ಯೂಬಿಕ್ ಮೀಟರ್ನಷ್ಟು ಹೂಳು ಎತ್ತಲು ಯೋಜಿಸಲಾಗಿದೆ.</p>.<p>ಮೂಲಗಳ ಪ್ರಕಾರ, ಈ ಹೂಳನ್ನು 15 ಸಾವಿರ ಎಕರೆಗೂ ಹೆಚ್ಚು ಪ್ರದೇಶಕ್ಕೆ ಗೊಬ್ಬರವಾಗಿ ಬಳಸಬಹುದಾಗಿದೆ.</p>.<p>ಮಾರೇನಹಳ್ಳಿ ಕ್ವಾರಿ ಅಲ್ಲದೇ, ಎಲೆಕ್ಟ್ರಾನಿಕ್ ಸಿಟಿ ಬಳಿಯೂ ಎರಡು ಜಾಗಗಳಲ್ಲಿ ಒಟ್ಟು 10 ಎಕರೆ ಜಾಗವನ್ನು ಗುರುತಿಸಲಾಗಿದೆ. ಆನೇಕಲ್ ಬಳಿ ಗುರುತಿಸಿರುವ ಕ್ವಾರಿಯೊಂದರಲ್ಲಿ ಹೂಳು ಸುರಿಯುವ ಬಗ್ಗೆಯೂ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>