ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಬುಧವಾರ ಭೇಟಿಯಾದ ಅವರು ಈ ಮನವಿ ಮಾಡಿದರು. ‘ಮಹಾರಾಷ್ಟ್ರ ಮೆಟ್ರೊ ರೈಲು ನಿಗಮಕ್ಕೆ ಶೇ 70ರಷ್ಟು ಬೋಗಿಗಳನ್ನು ನಿರ್ಮಿಸಿಕೊಡುವ ಹೊಣೆ ಸಂಸ್ಥೆಗೆ ಲಭಿಸಿದೆ. ಅದೇ ರೀತಿ ರಾಜ್ಯದಲ್ಲೂ ಬೋಗಿ ನಿರ್ಮಾಣ ಕಾರ್ಯವನ್ನು ವಹಿಸಿದರೆ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸುತ್ತವೆ’ ಎಂದು ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ.