ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ಲಾಲ್ ಅವರು ಪಕ್ಷದ ಮುಖಂಡರಿಗೆ ನೀಡಿರುವ ಸೂಚನೆ ಇದು. ಲೋಕಸಭಾ ಚುನಾವಣೆಯ ಸಿದ್ಧತೆ ಅಂಗವಾಗಿ ಅವರು ಮಂಗಳವಾರ ಸರಣಿ ಸಭೆಗಳನ್ನು ನಡೆಸಿದರು. ‘ಎಲ್ಲ ಕೆಲಸಗಳನ್ನು ಬದಿಗೊತ್ತಿ ಚುನಾವಣೆಗೆ ಸಜ್ಜಾಗಿ’ ಎಂದೂ ಸೂಚಿಸಿದರು. ವರಿಷ್ಠರು ನೀಡಿರುವ 23 ಅಂಶಗಳ ಕಾರ್ಯಕ್ರಮ ಅನುಷ್ಠಾನ ಮಾಡಿದರೆ ‘ಮಿಷನ್–22’ ಗುರಿ ತಲುಪಬಹುದು ಎಂದರು.