ಅವರು ಬಿಡುಗಡೆ ಮಾಡಿರುವುದು ನಕಲಿ ಡೈರಿ ಎಂಬುದನ್ನು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ, ಸುಳ್ಳು ಮಾಹಿತಿ ಹರಡಿದ ಸುರ್ಜೇವಾಲಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಈ ರೀತಿಯ ಸುಳ್ಳು ಆರೋಪ ಮಾಡದಂತೆ ಕಾಂಗ್ರೆಸ್ಗೆ ನಿರ್ದೇಶನ ನೀಡಬೇಕು ಎಂದು ನಿಯೋಗದ ನೇತೃತ್ವ ವಹಿಸಿದ್ದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಒತ್ತಾಯಿಸಿದ್ದಾರೆ.