ಮಡಿಕೇರಿ: ಕೇಂದ್ರ ಸರ್ಕಾರದ ರಫೆಲ್ ಒಪ್ಪಂದ ಕುರಿತು ಸುಳ್ಳು ಮಾಹಿತಿ ಹಬ್ಬಿಸುತ್ತಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ದೇಶದ ಜನರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಕೊಡಗು ಜಿಲ್ಲಾ ಬಿಜೆಪಿ ಘಟಕ ಪದಾಧಿಕಾರಿಗಳು ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಶನಿವಾರ ಪ್ರತಿಭಟನೆ ನಡೆಸಿದರು.
ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆದರೆ, ರಾಹುಲ್ ಗಾಂಧಿ ದೇಶದ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವುದು ಖಂಡನೀಯ ಎಂದು ಪ್ರತಿಭಟಷನಾಕಾರರುಆಕ್ರೋಶ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಮಾತನಾಡಿ, ರಫೆಲ್ ಖರೀದಿ ವಿಷಯದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಅಕ್ರಮ ನಡೆದಿಲ್ಲ. ಆದರೆ, ರಫೆಲ್ ಕುರಿತು ರಾಹುಲ್ ಗಾಂಧಿ ನೀಡುತ್ತಿರುವ ಹೇಳಿಕೆ ನಿಜಕ್ಕೂ ಸರಿಯಲ್ಲ. ಇದನ್ನೇ ನಂಬಿರುವ ಕಾಂಗ್ರೆಸ್ ಮುಖಂಡರು ಜನರಿಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ದೂರಿದರು.
ದೇಶದ ರಕ್ಷಣಾ ವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಕೇಂದ್ರ ಸರ್ಕಾರದಿಂದ ನಡೆದಿಲ್ಲ. ವಿರೋಧಿ ಹೇಳಿಕೆ ನೀಡುವವರಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ದೇಶದ ಸೈನ್ಯದ ಬಲವರ್ಧನೆಗೆಅತ್ಯಾಧುನಿಕ ಯುದ್ಧ ಸಾಮಗ್ರಿಖರೀದಿಗೆ ಒಪ್ಪಂದ ಮಾಡಿಕೊಳ್ಳಬೇಕಿದೆ. ಇದರ ಸರಿಯಾದ ಮಾಹಿತಿಯನ್ನು ಕಂಡುಕೊಳ್ಳುವ ಗೋಜಿಗೆ ಹೋಗದ ರಾಹುಲ್ ಗಾಂಧಿ ಜನರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿದರು.
ದೇಶದ ಭದ್ರತೆಗೆ ಹೆಚ್ಚಿನ ಯುದ್ಧವಿಮಾನಗಳನ್ನು ಪ್ರಧಾನಿ ನರೇಂದ್ರ ಮೋದಿ ಪಡೆಯಲು ಇಚ್ಛಿಸಿದ್ದಾರೆ. ಇದಕ್ಕೆ ಪಕ್ಷ ಬೇಧಮರೆತು ಎಲ್ಲರೂ ಒಂದಾಗಬೇಕು ಎಂದು ಕೋರಿದರು.