'ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಎಲ್ಲರಿಗೂ ಸಂವಿಧಾನದ ಮೌಲ್ಯಗಳನ್ನು ಬೋಧಿಸುತ್ತಾರೆ. ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿರುವ ಶಾಸಕರನ್ನು ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಕೂಡಲೇ ಅಮಾನತು ಮಾಡಬೇಕು ಹಾಗೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು’ ಎಂದು ಬಿಜೆಪಿ ಕರ್ನಾಟಕ ಸರಣಿ ಟ್ವೀಟ್ಗಳನ್ನು ಮಾಡಿದೆ. ‘ದಿನೇಶ್ ಗುಂಡೂರಾವ್ ಅವರು ಈಗ ಬಿಜೆಪಿ ಮೇಲೆ ಆರೋಪ ಮಾಡುವಂತಿಲ್ಲ. ಅವರ ಕಣ್ಗಾವಲಿನಲ್ಲೇ ನಾಲ್ಕು ಗೋಡೆಗಳ ನಡುವೆ ಈ ಘಟನೆ ನಡೆದಿದೆ. ಈಗೇನಂತೀರಿ ದಿನೇಶ್ ಅವರೇ’ ಎಂದೂ ಪ್ರಶ್ನಿಸಿದೆ.