ಬೆಂಗಳೂರು: ‘ಹಾಸನ ನಗರದ ಬಿ.ಎಂ ರಸ್ತೆ ವಿಸ್ತರಣೆ ಪ್ರಶ್ನಿಸಿದ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪಾಲಿಸಿಲ್ಲ’ ಎಂದು ದೂರಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮತ್ತು ನಗರಸಭೆ ಆಯುಕ್ತ ಬಿ.ಎ. ಪರಮೇಶ್ವರಪ್ಪ ಅವರಿಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.