‘ಸ್ವಯಂ ಉದ್ಯೋಗ ಕಲ್ಪಿಸುವಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಆರ್ಥಿಕ ಸೌಲಭ್ಯ ನೀಡುವುದು ಸೇರಿದಂತೆ ಹಲವಾರು ಯೋಜನೆಗಳನ್ನು ಸಹ ಜಾರಿಗೆ ತಂದಿದ್ದಾರೆ’ ಎಂದರು.
ಮುಖಂಡ ಶರತ್ ಕುಮಾರ್ ಗೌಡ ಮಾತನಾಡಿ, ‘ತಾಲ್ಲೂಕಿನ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. ಅವರಿಗೆ ನೆರವಾಗುವಲ್ಲಿ ಕೌಶಲ ತರಬೇತಿಯನ್ನೂ ನೀಡಲಾಗುತ್ತಿದೆ. ಸುಮಾರು 2 ಸಾವಿರ ಯುವಕರು ಹೆಸರು ನೋಂದಾಯಿಸಿದ್ದು 56 ಕಂಪನಿಗಳು ಮೇಳದಲ್ಲಿ ಭಾಗವಹಿಸುತ್ತಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ’ ಎಂದು ಅವರು ಹೇಳಿದರು. ವೃಕ್ಷಂ ಕಂಪನಿ ಸಿಇಓ ಸುರೇಶ್,ಮುಖಂಡ ಸಿ.ಮಂಜುನಾಥ್ ಮಾತನಾಡಿದರು.