ಸಭೆಯಲ್ಲಿ ಮಾತನಾಡಿದ ನಾರಾಯಣ ಹೃದಯಾಲಯದ ಮುಖ್ಯಸ್ಥ ಡಾ. ದೇವಿಶೆಟ್ಟಿ, ‘ಹೆಚ್ಚುತ್ತಿರುವ ಮಾಲಿನ್ಯದಿಂದಾಗಿ ಹೃದ್ರೋಗಿಗಳ ಸಂಖ್ಯೆ ದಿನಂಪ್ರತಿ ಏರಿಕೆಯಾಗುತ್ತಿದೆ. ಯುವಕರು ಮತ್ತು ಮಕ್ಕಳಿಗೂ ಇದು ಹರಡುತ್ತಿರುವುದು ಆತಂಕ ಮೂಡಿಸಿದೆ. ಮಾನಸಿಕ ಒತ್ತಡ, ದುಶ್ಚಟ, ಆಹಾರ ಕ್ರಮದಲ್ಲಿ ಅಸಮತೋಲನ ಹಾಗೂ ಕಲುಷಿತ ವಾತಾವರಣದಿಂದಾಗಿ ಹೃದಯ ಸಂಬಂಧಿ ರೋಗಗಳು ಉಲ್ಬಣವಾಗುತ್ತಿವೆ ಎಂದು ಅಧ್ಯಯನಗಳು ಹೇಳುತ್ತಿವೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ’ ಎಂದರು.