ಬೆಂಗಳೂರು: ರಸ್ತೆ ಅತಿಕ್ರಮಣಕ್ಕೆ ಸಂಬಂಧಿಸಿದ ದೂರಿನ ವಿಚಾರಣೆ ಮುಕ್ತಾಯಗೊಳಿಸಲು ಫಿರ್ಯಾದಿಯಿಂದ ಲಂಚದ ಹಣ ಸ್ವೀಕರಿಸುತ್ತಿದ್ದ ಬೆಂಗಳೂರು ಮಹಾನಗರಪಾಲಿಕೆ ಕಾರ್ಯಪಡೆಯ ಸಬ್ಇನ್ಸ್ಪೆಕ್ಟರ್ ವಿ. ಶಿವಕುಮಾರ್, ಅವರ ಸಹಾಯಕ ಚೇತನ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಬಂಧಿಸಿದ್ದಾರೆ.