ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ: ಬಿಎಂಟಿಎಫ್‌ ಪಿಎಸ್‌ಐ ಎಸಿಬಿ ಬಲೆಗೆ

Last Updated 7 ನವೆಂಬರ್ 2018, 20:11 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆ ಅತಿಕ್ರಮಣ‌ಕ್ಕೆ ಸಂಬಂಧಿಸಿದ ದೂರಿನ ವಿಚಾರಣೆ ಮುಕ್ತಾಯಗೊಳಿಸಲು ಫಿರ್ಯಾದಿಯಿಂದ ಲಂಚದ ಹಣ ಸ್ವೀಕರಿಸುತ್ತಿದ್ದ ಬೆಂಗಳೂರು ಮಹಾನಗರಪಾಲಿಕೆ ಕಾರ್ಯಪಡೆಯ ಸಬ್‌ಇನ್‌ಸ್ಪೆಕ್ಟರ್‌ ವಿ. ಶಿವಕುಮಾರ್‌, ಅವರ ಸಹಾಯಕ ಚೇತನ್‌ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪೊಲೀಸರು ಬಂಧಿಸಿದ್ದಾರೆ.

ನಗರದ ನಿವಾಸಿಯೊಬ್ಬರು ರಸ್ತೆ ಅತಿಕ್ರಮಿಸಿ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ ಎಂದು ಕೆಲವರು ಬಿಎಂಟಿಎಫ್‌ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ದೂರನ್ನು ಸ್ವೀಕರಿಸಿದ ಶಿವಕುಮಾರ್‌ ವಿಚಾರಣೆ ಮುಕ್ತಾಯಗೊಳಿಸಲು ಫಿರ್ಯಾದಿಯಿಂದ ₹ 70 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ತಮ್ಮ ಸಹಾಯಕ ಚೇತನ್‌ ಮುಖಾಂತರ ₹ 20 ಸಾವಿರ ಪಡೆದಿದ್ದರು.

ಉಳಿದ ₹ 50 ಸಾವಿರವನ್ನು ಶಿವಕುಮಾರ್‌ ಬುಧವಾರ ಅರ್ಜಿದಾರರಿಂದ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದರು. ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT