ಬೆಂಗಳೂರು: ‘ವಿಯೆಟ್ನಾಂನಿಂದ ಕಳಪೆ ಗುಣಮಟ್ಟದ ಕಾಳುಮೆಣಸು ಆಮದು ಮಾಡಿ ₹5000 ಕೋಟಿ ಹವಾಲಾ ದಂಧೆ ನಡೆಸುತ್ತಿದ್ದಾರೆ. ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದರೂ ತನಿಖೆ ನಡೆಸದೇ, ಕೇವಲ ₹ 8 ಕೋಟಿ ಪ್ರಕರಣದಲ್ಲಿ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ್ದಾರೆ’ ಎಂದು ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ಶುಕ್ರವಾರ ಆರೋಪಿಸಿದರು.