ಮಳೆ ನೀರು ಹರಿವಿಗಾಗಿ ನಿರ್ಮಾಣ ಮಾಡಿದ್ದ ಚರಂಡಿಯನ್ನು, ಸಿಮೆಂಟ್ ಮುಚ್ಚಳಿಕೆ ಹಾಕಿ ಸಂಪೂರ್ಣವಾಗಿ ಮುಚ್ಚಲಾಗಿತ್ತು. ರಸ್ತೆ ಮೇಲೆ ಬೀಳುವ ಮಳೆ ನೀರು ಚರಂಡಿ ಒಳಗೆ ಇಳಿಯಲು ಅವಕಾಶ ನೀಡಿರದ ಕಾರಣ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ಕೇಳಿ ಬಂದಿತ್ತು. ‘ಪ್ರಜಾವಾಣಿ’ ಈ ಬಗ್ಗೆ ವಿಶೇಷ ವರದಿ ಪ್ರಕಟಿಸುವ ಮೂಲಕ ಲೋಪಗಳು, ಅದರಿಂದಾಗುವ ಸಮಸ್ಯೆಗಳನ್ನು ಬಿಆರ್ಟಿಎಸ್ ಗಮನಕ್ಕೆ ತಂದಿತ್ತು.