ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿ.ಎಸ್.ಯಡಿಯೂರಪ್ಪ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

Last Updated 2 ಏಪ್ರಿಲ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ದೇವರ ಬೀಸನಹಳ್ಳಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ವಶಪಡಿಸಿಕೊಂಡಿದ್ದ ಜಮೀನನ್ನು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆದ ಬಿ.ಎಸ್‌.ಯಡಿಯೂರಪ್ಪ ವಿರುದ್ಧದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ಪ್ರಕರಣದ ಅಂತಿಮ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ನಿಗದಿಪಡಿಸಲಾಗಿದೆ.

ಪ್ರಕರಣವೇನು?: ಬಿ.ಎಸ್‌.ಯಡಿಯೂರಪ್ಪ ಅವರು ಉಪಮುಖ್ಯಮಂತ್ರಿಯಾಗಿದ್ದ ವೇಳೆ ಕೆಐಎಡಿಬಿ, ವರ್ತೂರು ಹೋಬಳಿಯ ದೇವರಬೀಸನಹಳ್ಳಿ ಪ್ರದೇಶದ ವಿವಿಧ ಸರ್ವೇ ನಂಬರ್‌ಗಳಲ್ಲಿ ಜಮೀನು ಸ್ವಾಧೀನಪಡಿಸಿಕೊಂಡಿತ್ತು.

‘ಕೆಐಎಡಿಬಿ ವಶಪಡಿಸಿಕೊಂಡ ಪ್ರದೇಶದಲ್ಲಿ ಕೆಲವು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ ಡಿನೋಟಿಫೈ ಮಾಡಲಾಗಿದೆ’ ಎಂದು ಆರೋಪಿಸಿ ವಾಸುದೇವ ರೆಡ್ಡಿ 2013ರ ಜುಲೈ 10ರಂದು ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಅಂದಿನ ಕೈಗಾರಿಕಾ ಸಚಿವರಾಗಿದ್ದ ಆರ್‌.ವಿ.ದೇಶಪಾಂಡೆ ಈ ಪ್ರಕರಣದ ಮೊದಲನೇ ಆರೋಪಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT