ಎಸ್ಆರ್ಎಸ್ ಕಂಪನಿಯ ಬಸ್ ಬೆಂಗಳೂರಿನ ಕಡೆ ಬರುತ್ತಿತ್ತು. ನಿಯಂತ್ರಣ ತಪ್ಪಿದ ಬಸ್ ಜೆಸಿಬಿ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಗುದ್ದಿದೆ. ಪಕ್ಕದಲ್ಲಿ ಸಂಚರಿಸುತ್ತಿದ್ದ ಮಾರುತಿ ವ್ಯಾನ್ಗೆ ಗುದ್ದಿ ಹಳ್ಳಕ್ಕೆ ಹೋಗಿ ನಿಂತಿದೆ. ಘಟನೆಯಲ್ಲಿ ಬಸ್ನಲ್ಲಿದ್ದ 10 ಮಂದಿ ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ.