ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯಾಪಾರಿ ಅಪಹರಣ ಇಬ್ಬರ ಬಂಧನ

Last Updated 18 ಸೆಪ್ಟೆಂಬರ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ವ್ಯಾಪಾರಿ ನೂರ್‌ ಇಸ್ಲಾಂ ಸರ್ದಾರ್‌ ಎಂಬುವರನ್ನು ಅಪಹರಿಸಿ, ₹ 5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರನ್ನು ಬಂಧಿಸುವಲ್ಲಿ ಮಾದನಾಯಕಹಳ್ಳಿ ಪೊಲೀಸರು ಯಶಸ್ವಿ ಆಗಿದ್ದಾರೆ.

ಬಿಇಎಲ್‌ ವೃತ್ತದ ಬಳಿ ಹಣ ಪಡೆಯಲು ಬಂದ ಆರೋಪಿಗಳಾದ ಸೈಯ್ಯದ್‌ ಶಬ್ಬೀರ್‌ (23) ಮತ್ತು ಸೈಯ್ಯದ್‌ ವಾಸೀಂ (25) ಬಂಧಿತರು. ಪ್ರಕರಣದ ಸೂತ್ರಧಾರ ಸುಹೇಲ್‌ ಎಂಬಾತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಗುಜರಾತಿನ ಸೂರತ್‌ನವರಾದ ಸರ್ದಾರ್‌ ಅವರು ಆಸ್ಪತ್ರೆಗೆ ಹೋಗುತ್ತಿದ್ದ ಅವರನ್ನು ಉತ್ತರ ತಾಲ್ಲೂಕಿನ ಮಾಚೋಹಳ್ಳಿ ಗೇಟ್‌ ಬಳಿ ಅಪಹರಿಸಲಾಗಿತ್ತು. ಈ ಬಗ್ಗೆ ಅವರ ಪತ್ನಿ ನುಸ್ರತ್‌ ಬೇಗಂ ಮಾದನಾಯಕಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT