<p><strong>ತುಮಕೂರು: </strong>ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರದ ಸಮೀಪ ಎಸ್ಆರ್ಎಸ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಶನಿವಾರ ಬೆಳಿಗ್ಗೆ ಬೆಂಕಿಗೆ ಆಹುತಿ ಆಗಿದೆ.</p>.<p>ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಿಂದ ಬೆಂಗಳೂರಿಗೆ ಈ ಬಸ್ ಸಾಗುತ್ತಿತ್ತು. ಬಸ್ನಲ್ಲಿ 30 ಪ್ರಯಾಣಿಕರಿದ್ದರು. ಚಾಲಕ ಸೇರಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.</p>.<p>ಬೆಳಿಗ್ಗೆ 5.30ರ ವೇಳೆಗೆ ಬಸ್ ಕ್ಯಾತ್ಸಂದ್ರ ಸಮೀಪ ಹೆದ್ದಾರಿಯಲ್ಲಿ ಸಾಗುವಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಇದನ್ನು ಕಂಡ ಕೆಲ ಪ್ರಯಾಣಿಕರು ಕೂಗಾಡಿದ್ದಾರೆ. ಚಾಲಕ ತಕ್ಷಣ ವಾಹನ ನಿಲುಗಡೆ ಮಾಡುವಷ್ಟರಲ್ಲಿ ಎಲ್ಲ ಪ್ರಯಾಣಿಕರು ಎದ್ದು ಬಸ್ನಿಂದ ಕೆಳಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾರೆ.</p>.<p>ಬೆಳಗಿನ ಜಾವ ಮತ್ತು ಬೆಂಗಳೂರು ಸಮೀಪಿಸುತ್ತಿರುವುದರಿಂದ ಬಹುತೇಕ ಪ್ರಯಾಣಿಕರು ಎಚ್ಚರವಿದ್ದರು. ಹೀಗಾಗಿ ಬೆಂಕಿ ಕಂಡ ತಕ್ಷಣ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲೇ ಅಗ್ನಿಶಾಮಕ ದಳದ ಕಚೇರಿ ಇದೆ. ಅಲ್ಲಿನ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ. ಅಂದಾಜು ₹ 25 ಲಕ್ಷ ಮೊತ್ತದಷ್ಡು ನಷ್ಟವಾಗಿದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 48ರ ಕ್ಯಾತ್ಸಂದ್ರದ ಸಮೀಪ ಎಸ್ಆರ್ಎಸ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್ ಶನಿವಾರ ಬೆಳಿಗ್ಗೆ ಬೆಂಕಿಗೆ ಆಹುತಿ ಆಗಿದೆ.</p>.<p>ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಿಂದ ಬೆಂಗಳೂರಿಗೆ ಈ ಬಸ್ ಸಾಗುತ್ತಿತ್ತು. ಬಸ್ನಲ್ಲಿ 30 ಪ್ರಯಾಣಿಕರಿದ್ದರು. ಚಾಲಕ ಸೇರಿದಂತೆ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.</p>.<p>ಬೆಳಿಗ್ಗೆ 5.30ರ ವೇಳೆಗೆ ಬಸ್ ಕ್ಯಾತ್ಸಂದ್ರ ಸಮೀಪ ಹೆದ್ದಾರಿಯಲ್ಲಿ ಸಾಗುವಾಗ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಇದನ್ನು ಕಂಡ ಕೆಲ ಪ್ರಯಾಣಿಕರು ಕೂಗಾಡಿದ್ದಾರೆ. ಚಾಲಕ ತಕ್ಷಣ ವಾಹನ ನಿಲುಗಡೆ ಮಾಡುವಷ್ಟರಲ್ಲಿ ಎಲ್ಲ ಪ್ರಯಾಣಿಕರು ಎದ್ದು ಬಸ್ನಿಂದ ಕೆಳಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾರೆ.</p>.<p>ಬೆಳಗಿನ ಜಾವ ಮತ್ತು ಬೆಂಗಳೂರು ಸಮೀಪಿಸುತ್ತಿರುವುದರಿಂದ ಬಹುತೇಕ ಪ್ರಯಾಣಿಕರು ಎಚ್ಚರವಿದ್ದರು. ಹೀಗಾಗಿ ಬೆಂಕಿ ಕಂಡ ತಕ್ಷಣ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆ ನಡೆದ ಸ್ಥಳಕ್ಕೆ ಸಮೀಪದಲ್ಲೇ ಅಗ್ನಿಶಾಮಕ ದಳದ ಕಚೇರಿ ಇದೆ. ಅಲ್ಲಿನ ಸಿಬ್ಬಂದಿ ತಕ್ಷಣ ಬೆಂಕಿ ನಂದಿಸಿದ್ದಾರೆ. ಅಂದಾಜು ₹ 25 ಲಕ್ಷ ಮೊತ್ತದಷ್ಡು ನಷ್ಟವಾಗಿದೆ ಎಂದು ಅಗ್ನಿ ಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>